ಕರಾವಳಿರಾಜಕೀಯ

ಚುನಾವಣೆ ಸಂದರ್ಭದಲ್ಲಿ ನನ್ನ ಜೊತೆಯಲ್ಲೇ ಇದ್ದು ಬ್ಯಾಟ್ ಬೀಸಿದವರು ಯಾರೆಂದು ನನಗೆ ಗೊತ್ತಿದೆ- ಶಾಸಕ ಅಶೋಕ್ ರೈ

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಾಡಿರುವ ಭಾಷಣದ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.

‘ನಾನು ಚುನಾವಣೆಯಲ್ಲಿ ಗೆದ್ದು ಶಾಸಕನಾದ ಬಳಿಕ ಹಲವರು ನನ್ನ ಬಳಿಗೆ ಬಂದು ಅಶೋಕಣ್ಣ ನಿಮ್ಮ ಪರ ನಾವು ಕೆಲಸ ಮಾಡಿದ್ದೇವೆ ಎಂದು ಹೇಳಿದ್ದಾರೆ. ಅದರಲ್ಲಿ ಕೆಲವರು ಚುನಾವಣೆ ಮುಗಿಯುವ ತನಕವೂ ಬ್ಯಾಟಿನದ್ದೇ ಡಿಪಿ ಹಾಕಿದ್ದರು. ಚುನಾವಣೆ ವೇಳೆ ಬ್ಯಾಟ್‌ನ ಡಿಪಿ ಹಾಕಿದವರ ಸ್ಕ್ರೀನ್ ಶಾಟ್ ನನ್ನ ಬಳಿ ಇದೆ. ನನ್ನ ಜೊತೆಯಲ್ಲೇ ಇದ್ದು ಬ್ಯಾಟ್ ಬೀಸಿದವರು ಯಾರೆಂದು ನನಗೆ ಗೊತ್ತಿದೆ. ಯಾರೆಲ್ಲಾ ಪಕ್ಷಕ್ಕೆ ವಿರುದ್ದವಾಗಿ ಮತ ಹಾಕಿದ್ದಾರೆಂದೂ ಗೊತ್ತಿದೆ. ಆದರೆ ನಾನು ಗೆದ್ದ ಬಳಿಕ ಯಾರನ್ನೂ ದೂರ ಮಾಡಿಲ್ಲ, ಎಲ್ಲರನ್ನೂ ಹತ್ತಿರ ಮಾಡಿಕೊಂಡಿದ್ದೇನೆ, ಬ್ಯಾಟ್ ಬೀಸಿದವರು, ಬಿಜೆಪಿಯವರು ಈಗ ನನ್ನ ಬಳಿಗೆ ಬಂದು ಅವರ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದರು.

ಶಾಸಕರು ಆಡಿರುವ ಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯ ವಿಷಯವಾಗಿದೆ.

ಅಶೋಕ್ ರೈ ಅವರ ಜೊತೆಗಿದ್ದುಕೊಂಡೇ ವಿರುದ್ಧವಾಗಿ ಕೆಲಸ ಮಾಡಿದವರು ಯಾರು..? ಎದುರಿಗೆ ಅಶೋಕ್ ರೈಯವರಿಗೆ ಸಪೋರ್ಟ್ ಮಾಡುವವರಂತೆ ನಟಿಸಿ ಒಳಗಿಂದೊಳಗೆ ಬ್ಯಾಟ್ ಬೀಸಿದವರು ಯಾರು..? ಅಂತವರಿಗೆ ಪಕ್ಷದಲ್ಲಿರಲು ನೈತಿಕತೆ ಇದೆಯೇ ಎನ್ನುವ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ಒಟ್ಟಿನಲ್ಲಿ ಶಾಸಕರು ಆಡಿರುವ ಮಾತು ಪುತ್ತೂರು ಕಾಂಗ್ರೆಸ್‌ನಲ್ಲಿ ಸಂಚಲನ ಸೃಷ್ಠಿಸಿದೆ.

Leave a Reply

Your email address will not be published. Required fields are marked *

error: Content is protected !!