ಜಿಲ್ಲೆರಾಜ್ಯ

ಹೊತ್ತಿ ಉರಿದ ಪಟಾಕಿ ಅಂಗಡಿ: 12 ಮಂದಿ ಸಜೀವ ದಹನ



ಲಾರಿಯಲ್ಲಿ ಪಟಾಕಿ ಅನ್ಲೋಡ್ ಮಾಡುವಾಗ ಆಕಸ್ಮಿಕ ಬೆಂಕಿ ತಗುಲಿ ಪಟಾಕಿ ಅಂಗಡಿ ಹೊತ್ತಿ ಉರಿದ ಪರಿಣಾಮ 12 ಜನರು ಸಜೀವ ದಹನವಾಗಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಶನಿವಾರ ನಡೆದಿದೆ. ನವೀನ್ ಎಂಬುವರಿಗೆ ಸೇರಿದ ಪಟಾಕಿ ಮಳಿಗೆಯಲ್ಲಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಅಗ್ನಿ ದುರಂತದಲ್ಲಿ ಕೋಟ್ಯಂತರ ಮೌಲ್ಯದ ಪಟಾಕಿ ಅಗ್ನಿಗಾಹುತಿಯಾಗುವುದರೊಂದಿಗೆ 1 ಕ್ಯಾಂಟ್ರೋ, 2 ಬೊಲೆರೋ, 4 ಬೈಕ್ಗಳು ಸಹ ಬೆಂಕಿಗಾಹುತಿ ಆಗಿವೆ.

Leave a Reply

Your email address will not be published. Required fields are marked *

error: Content is protected !!