ಕರಾವಳಿ

ಉಪ್ಪಿನಂಗಡಿ: ತೆಕ್ಕಾರುನಲ್ಲಿ ಸಿಡಿಲು ಬಡಿದು ಮನೆಗೆ ಭಾಗಶಃ ಹಾನಿ



ಉಪ್ಪಿನಂಗಡಿ: ಅ. 12ರಂದು ಬಡಿದ ಸಿಡಿಲಿಗೆ ಮನೆಯೊಂದು ಭಾಗಶ ಬಿರುಕು ಬಿಟ್ಟು ಮನೆ ಸಂಪೂರ್ಣವಾಗಿ ಹಾನಿಯಾದ ಘಟನೆ ಉಪ್ಪಿನಂಗಡಿ ಸಮೀಪದ ತೆಕ್ಕಾರು ಎಂಬಲ್ಲಿ ನಡೆದಿದೆ.

ತೆಕ್ಕಾರುವಿನ ಕಾಪಿಗುಡ್ಡೆಯ ತಾಹಿರ ಎಂಬವರ ಮನೆಗೆ ಸಿಡಿಲು ಬಡಿದ ಪರಿಣಾಮ ಅಂದಾಜು ರೂ.2 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಮನೆಯ ಯಾರಿಗೂ ಅಪಾಯ ಸಂಭವಿಸಿಲ್ಲ. ಸಿಡಿಲಿನ ರಭಸಕ್ಕೆ ಮನೆಯ ಗೋಡೆಗಳು ಸಂಪೂರ್ಣವಾಗಿ ಬಿರುಕು ಬಿಟ್ಟಿದ್ದು ಮನೆಯ ವಯರಿಂಗ್ ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಮನೆಯ ಪ್ರತಿ ಗೋಡೆಗಳು ಬಿರುಕು ಬಿಟ್ಟಿದ್ದು ಯಾವಾಗಲೂ ಬೇಕಾದರೂ ಮನೆ ಬೀಳುವ ಸಾಧ್ಯತೆ ಹೆಚ್ಚಿದೆ.

ಸ್ಥಳಕ್ಕೆ ತೆಕ್ಕಾರು ಗ್ರಾಮ ಆಡಳಿತಾಧಿಕಾರಿ ಸಾಕಮ್ಮ ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು. ಇದೇ ವೇಳೆ ಕುಟುಂಬಸ್ಥರು ಗ್ರಾಮ ಆಡಳಿತಾಧಿಕಾರಿ ಸಮ್ಮುಖದಲ್ಲಿ ತಹಸೀಲ್ದಾರ್ ರರಿಗೆ ಸೂಕ್ತ ಪರಿಹಾರ ಕೋರಿ ಮನವಿ ನೀಡಿದರು.
ತೆಕ್ಕಾರು ಪಂಚಾಯತ್ ಮಾಜಿ ಅಧ್ಯಕ್ಷ ಅಬ್ದುಲ್ ರಜಾಕ್, ಗ್ರಾ ಪಂ ಮಾಜಿ ಸದಸ್ಯ ಎನ್ ಎಚ್ ಅಬ್ದುಲ್ ರಹಿಮಾನ್, ಸದಸ್ಯ ಅನ್ವರ್ ನಿಯೋಗದಲ್ಲಿದ್ದರು.

Leave a Reply

Your email address will not be published. Required fields are marked *

error: Content is protected !!