ಮಾಡಾವು: ಹೊಳೆಯಲ್ಲಿ ಕಣ್ಮರೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ
ಪುತ್ತೂರು: ಹೊಳೆಯಲ್ಲಿ ಈಜಲು ತೆರಳಿದ್ದ ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್(17. ವ) ಮೃತದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ. ನಿನ್ನೆ ಸಂಜೆಯಿಂದ ತೀವ್ರ ಹುಡುಕಾಟ ನಡೆಸಲಾಗುತ್ತಿತ್ತು.

ಗೆಳೆಯರ ಜೊತೆಗೂಡಿ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿನ ಹೊಳೆಗೆ ತೆರಳಿದ್ದು ಈಜುವ ವೇಳೆ ಬಾಲಕ ನೀರಿನಲ್ಲಿ ಮುಳುಗಿದ್ದ. ಮುಳುಗು ತಜ್ಞರ ತಂಡ ಮತ್ತು ಅಗ್ನಿ ಶಾಮಕ ದಳದವರು ಹುಡುಕಾಟದಲ್ಲಿ ಭಾಗವಹಿಸಿದ್ದರು.