ಬೆಳ್ತಂಗಡಿ: ಪಿಕಪ್ ಡಿಕ್ಕಿ ಹೊಡೆದು ಬಾಲಕ ಮಹಮ್ಮದ್ ರಂಝಿನ್ ಮೃತ್ಯು
ಬೆಳ್ತಂಗಡಿ: ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು ಬಾಲಕ ಮೃತಪಟ್ಟಿರುವ ಘಟನೆ ಲಾಯಿಲ ಜಂಕ್ಷನ್ ನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಹಮ್ಮದ್ ರಂಝಿನ್(10.ವ) ಮೃತಪಟ್ಟ ಬಾಲಕ.
ಶಾಲಾ ರಜೆಯ ಹಿನ್ನೆಲೆ ಮಹಮ್ಮದ್ ರಂಝಿನ್ ಸಂಬಂಧಿಕರ ಮನೆಗೆ ಬಂದಿದ್ದು, ಅಂಗಡಿಗೆ ಹೋಗಿ ವಾಪಾಸ್ ರಸ್ತೆ ದಾಟುವಾಗ ಲಾಯಿಲ ಜಂಕ್ಷನ್ ಬಳಿ ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ಬಾಲಕ ಗಂಭೀರ ಗಾಯಗೊಂಡಿದ್ದಾನೆ. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಬಾಲಕ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.