ರಾಜಕೀಯರಾಜ್ಯರಾಷ್ಟ್ರೀಯ

ಬಿಜೆಪಿ ರಾಜಾಧ್ಯಕ್ಷ ಸ್ಥಾನ ವಿಚಾರ: ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದೇನು ಗೊತ್ತಾ



ಕರ್ನಾಟಕ ಬಿಜೆಪಿ ರಾಜಾಧ್ಯಕ್ಷರ ಬದಲಾವಣೆ ವಿಚಾರ ಸದ್ದು ಮಾಡುತ್ತಿರುವ ಮಧ್ಯೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರು ಕೂಡ ಕೇಳಿ ಬಂದಿದ್ದು, ಇದೀಗ ಖುದ್ದು ಶೋಭಾ ಕರಂದ್ಲಾಜೆ ಅವರು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ.

ಮೈಸೂರಿನ ಅರಮನೆ‌ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ ನೀಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ನಾನು ಕೇಂದ್ರದಲ್ಲಿ ಕೃಷಿ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ. ನನಗೆ ಒಳ್ಳೆಯ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೆಯ ಕೆಲಸ ಮಾಡುತ್ತಿದ್ದೇನೆʼ ನನಗೆ ವರಿಷ್ಠರಿಂದಲೂ ಯಾವ ಸೂಚನೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *

error: Content is protected !!