ಕರಾವಳಿಕ್ರೈಂ

ಬೆಳ್ತಂಗಡಿ: ಆನ್’ಲೈನ್ ಜಾಬ್ ಆಫರ್ ನಂಬಿ 4,25,934 ರೂ ಕಳೆದುಕೊಂಡ ಮಹಿಳೆ



ಬೆಳ್ತಂಗಡಿ: ಆನ್ ಲೈನ್ ಜಾಬ್ ಆಫರ್ ನೀಡಿ ಹಣ ಪಡೆದು ವಂಚಿಸಿದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಯರ್ತ್ತಡ್ಕ ನಿವಾಸಿ ಉಷಾ ಪಿ.ವಿ.(41.ವ) ಎಂಬವರು ನೀಡಿದ ದೂರಿನಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಸಾಂದರ್ಭಿಕ ಚಿತ್ರ

ಅ.9ರಂದು ಅಪರಿಚಿತ ವ್ಯಕ್ತಿಯೊಬ್ಬ ಉಷಾ ಅವರಿಗೆ ಕರೆಮಾಡಿ ಆನ್ ಲೈನ್ ಜಾಬ್ ಆಫರ್ ಕೊಟ್ಟಿದ್ದ. ಅದರಂತೆ ಉಷಾ ಅವರು ಕೆಲಸ ಪ್ರಾರಂಭಿಸಿದ್ದರು. ಆ ಬಳಿಕ ಅಪರಿಚಿತರು ಉಷಾ ಅವರಿಗೆ ವಿವಿಧ ಕಾರಣ ನೀಡಿ ಒಟ್ಟು ರೂ 4,25,934/ ಗಳನ್ನು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ ಎಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!