ಹುಲಿ ಉಗುರು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ವರ್ತೂರು ಸಂತೋಷ್’ಗೆ ಜಾಮೀನು
ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 10’ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ಜಾಮೀನು ದೊರಕಿದೆ. ನ್ಯಾಯಾಂಗ ಬಂಧನದಲ್ಲಿ ಅವರಿಗೆ ರಿಲೀಫ್ ಸಿಕ್ಕಂತಾಗಿದ್ದು ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯದಿಂದ ಜಾಮೀನು ನೀಡಲಾಗಿದೆ.
ಇಂದು (ಅಕ್ಟೋಬರ್ 27) ಸಂಜೆ ವೇಳೆಗೆ ಬಿಡುಗಡೆ ಆಗಲಿದ್ದಾರೆ ಎಂದು ತಿಳಿದು ಬಂದಿದೆ.