ರಾಜ್ಯ

ಕನ್ನಡ ನಾಡ ಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ- ಸಿಎಂ ಸಿದ್ದರಾಮಯ್ಯ



ಸಿಎಂ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವ ಶುಭಾಶಯಗಳನ್ನು ಸಲ್ಲಿಸಿದ್ದಾರೆ.

ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ ಎಂದು ಅವರು ಟ್ವೀಟ್ ಮಾಡಿದ್ದಾರೆ.

1973 ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!