ಕರಾವಳಿ

ಹತ್ಯೆಯಾದ ಅಕ್ಷಯ್ ಕಲ್ಲೇಗ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ನೀಡಲು ಸಂಜೀವ ಮಠಂದೂರು ಆಗ್ರಹ



ಪುತ್ತೂರು: ಅಕ್ಷಯ್ ಕಲ್ಲೇಗ ಅವರ ಹತ್ಯೆಯ ಹಿಂದೆ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬ ಕುರಿತು ಪೊಲೀಸ್ ಇಲಾಖೆಯಿಂದ ಪತ್ತೆ ಹಚ್ಚುವ ಕಾರ್ಯ ಶೀಘ್ರ ಆಗಬೇಕು. ಜತೆಗೆ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ನೀಡುವ ಕೆಲಸ ಸರಕಾರದಿಂದ ಆಗಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.

ಹತ್ಯೆಯಾದ ಅಕ್ಷಯ್ ಕಲ್ಲೇಗ ಅವರ ಪಾರ್ಥಿವ ಶರೀರದ ದರ್ಶನ ಮಾಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು

ಹುಲಿವೇಷ ತಂಡ ಕಟ್ಟು ಮೂಲಕ ಸಾಂಸ್ಕೃತಿಕ ಕ್ಷೇತ್ರಕ್ಕೆ ಕೊಡುಗೆ ಕೊಟ್ಟ ಅಕ್ಷಯ್ ಕಲ್ಲೇಗ ಅವರ ಮರಣ ಈ ರೀತಿ ಆಗಲಿದೆ ಎಂದು ಯಾರೂ ಭಾವಿಸಿರಲಿಲ್ಲ ಎಂದ ಅವರು ದ.ಕ ಜಿಲ್ಲೆಯಲ್ಲಿ ಲಾ ಆ್ಯಂಡ್ ಆರ್ಡರ್ ಕುಸಿದಿದೆ.
ರಾತ್ರಿ ಪೊಲೀಸ್ ಬೀಟ್ ಪರಿಣಾಮಕಾರಿಯಾಗಿ ಮಾಡುವಲ್ಲಿ ಸರಕಾರ ಪರೋಕ್ಷವಾಗಿ ವೈಪಲ್ಯ ಆಗಿದೆ ಎಂದು ಆರೋಪಿಸಿದರು.

Leave a Reply

Your email address will not be published. Required fields are marked *

error: Content is protected !!