ಉಡುಪಿ: ನಾಲ್ವರ ಬರ್ಬರ ಹತ್ಯೆ ಪ್ರಕರಣ: ಕೇರಳದಲ್ಲಿ ಆರೋಪಿ ಸುಳಿವು..?
ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತ್ತೆಗಾಗಿ ಪೊಲೀಸರು ಕೇರಳಕ್ಕೆ ತೆರಳಿದ್ದಾರೆ ಎನ್ನಲಾಗಿದ್ದು ಆರೋಪಿ ಕೇರಳದಲ್ಲಿ ತಲೆ ಮರೆಸಿಕೊಂಡಿರುವ ಬಗ್ಗೆ ಸಂಶಯ ಮೂಡಿದೆ.
![](https://newsbites.in/wp-content/uploads/2023/11/IMG_20231113_225731-1.jpg)
ಉಡುಪಿ ಡಿವೈಎಸ್ಪಿ ದಿನಕರ್ ಪಿ, ನೇತೃತ್ವದ ತಂಡ ಅಲ್ಲಿಗೆ ತೆರಳಿದ್ದು, ಆರೋಪಿಯನ್ನು ಬಂಧಿಸಿ ಕರೆತರುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದರೆ ಖಚಿತ ಮಾಹಿತಿ ಮಾತ್ರ ಲಭ್ಯವಾಗಿಲ್ಲ. ಪೊಲೀಸರ ಅಧಿಕೃತ ಹೇಳಿಕೆಯಿಂದಷ್ಟೆ ಸತ್ಯಾಂಶ ಹೊರಬರಲಿದೆ