ಕೆದಿಲ ಮನೆಯಿಂದ ಕಳ್ಳತನ: ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ
ಪುತ್ತೂರು: ಕೆಲವು ದಿನಗಳ ಹಿಂದೆ ಕೆದಿಲ ಮನೆಯಿಂದ ಕಳವು ಪ್ರಕರಣಕ್ಕೆ ಸಂಬಂಧಿಸಿ ಅಂತರ್ಜಿಲ್ಲಾ ಕಳವು ಆರೋಪಿ ಚಿಕ್ಕಮಗಳೂರು ಇಂದಿರಾ ನಗರ ನಿವಾಸಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕರ್(62ವ) ಎಂಬವರನ್ನು ಪುತ್ತೂರು ನಗರ ಠಾಣೆ ಪೊಲೀಸರು ಬಂಧಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
![](https://newsbites.in/wp-content/uploads/2023/12/IMG_20231205_211321.jpg)
ಈತನ ವಿರುದ್ಧ ದ.ಕ. ಜಿಲ್ಲೆ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿ 80ಕ್ಕೂ ಅಧಿಕ ಕಳವು ಪ್ರಕರಣಗಳು ದಾಖಲಾಗಿದೆ.