ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ಗಿಡ ನೆಡುವ ಮೂಲಕ ಪರಿಸರ ಪ್ರೇಮ ಮೆರೆದ ಶಾಸಕ ಅಶೋಕ್ ರೈ
ಪುತ್ತೂರು: ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಗಿಡ ನೆಡುವ ಮೂಲಕ ಬೆಳಗಾವಿಯ ಅಧಿವೇಶನದ ಸವಿನೆನಪಿನ ಗುರುತು ಮಾಡಿದರು.
![](https://newsbites.in/wp-content/uploads/2023/12/IMG_20231207_135546-1024x844.jpg)
ಹಲಸಿನ ಗಿಡವನ್ನು ಶಾಸಕರು ನೆಡುವ ಮೂಲಕ ತನ್ನ ಪರಿಸರ ಪ್ರೇಮವನ್ನು ಮೆರೆದರು. ಪುತ್ತೂರಿನ ರಸ್ತೆ ಬದಿಗಳಲ್ಲಿ ಕಾಟು ಮಾವಿನ ಗಿಡ ನೆಡುವ ಮೂಲಕ ಸುದ್ದಿಯಾಗಿದ್ದ ಶಾಸಕರು ಬೆಳಗಾವಿಯಲ್ಲಿ ಹಲಸಿನ ಗಿಡ ನೆಡುವ ಮೂಲಕ ಎರಡನೇ ಬಾರಿಗೆ ಸುದ್ದಿಯಾದರು.