ಕರಾವಳಿಕ್ರೈಂಜಿಲ್ಲೆ

ಪುತ್ತೂರು: ಕುಂಬ್ರದಲ್ಲಿ ಕೆಲಸಕ್ಕಿದ್ದ ಯುವಕನ ಕೊಲೆ- ಇಬ್ಬರ ಬಂಧನ



ಪುತ್ತೂರು ತಾಲೂಕಿನ ಕುಂಬ್ರದಲ್ಲಿ ಟಿಪ್ಪರ್‌ ಚಾಲಕನಾಗಿದ್ದ ಬಾಗಲಕೋಟೆ ಜಿಲ್ಲೆಯ ಯುವಕನೋರ್ವ ನಾಪತ್ತೆಯಾಗಿದ್ದ ಪ್ರಕರಣ ಇದೀಗ ಕೊಲೆಯಲ್ಲಿ ಅಂತ್ಯ ಕಂಡಿದೆ. ಕೆಲ ದಿನಗಳ ಹಿಂದೆ ಮೂವರು ಕುಂಬ್ರಕ್ಕೆ ಬಂದು ಯುವಕನನ್ನು ಕರೆದುಕೊಂಡು ಹೋಗಿದ್ದು ಪ್ರಕರಣ ದಾಖಲಾಗಿತ್ತು.

ಕುಂಬ್ರದ ಮಾತೃಶ್ರೀ ಅರ್ಥ್ ಮೂವರ್ಸ್ ಸಂಸ್ಥೆಯಲ್ಲಿ ಟಿಪ್ಪರ್‌ ಡ್ರೈವರ್‌ ಆಗಿದ್ದ ಬಾಗಲಕೋಟೆ ಬಾದಾಮಿ ಡಾಣಕಶಿರೂರು ಮೂಲದ ಹನುಮಂತ ಮಾದರ (23. ವ) ಮೃತದೇಹ ಆಗುಂಬೆ ಘಾಟ್‌ನಲ್ಲಿ ಪತ್ತೆಯಾಗಿದೆ. ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಇನ್ನೋರ್ವ ಪರಾರಿಯಾಗಿದ್ದಾನೆ .

ಕೊಲೆಗೀಡಾದ ಹನುಮಂತ ಮಾದಾರನೂ ಆರೋಪಿಗಳಲ್ಲಿ ಓರ್ವನ ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿರುವುದೇ ಕೊಲೆಗೆ ಕಾರಣ ಎನ್ನಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!