ಪುತ್ತೂರು: ಯುವಕ ಆತ್ಮಹತ್ಯೆ
ಪುತ್ತೂರು: ಯುವ ವಿಜ್ಞಾನಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕು ಆರ್ಯಾಪು ಕಲ್ಲರ್ಪೆಯಲ್ಲಿ ನಡೆದಿದೆ. ಭರತ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡವರು.
![](https://newsbites.in/wp-content/uploads/2023/12/IMG_20231214_142104.jpg)
ಹೈದರಾಬಾದಿನಲ್ಲಿ ವಿಜ್ಞಾನಿಯಾಗಿದ್ದ ಭರತ್ ನಿನ್ನೆ ರಾತ್ರಿ ಮನೆಗೆ ಬಂದಿದ್ದು, ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿದ್ಯಾಭ್ಯಾಸ ಮುಗಿಸಿ ಕಳೆದ ತಿಂಗಳಷ್ಟೇ ಉದ್ಯೋಗ ಪಡೆದಿದ್ದರು. ಮೃತರು ಸಹೋದರ ಪತ್ರಕರ್ತ ಗಣೇಶ್ ಕಲ್ಲರ್ಪೆ ಸಹೋದರಿ ಹಾಗೂ ತಂದೆಯನ್ನು ಅಗಲಿದ್ದಾರೆ.