ಕರಾವಳಿ

ಈಶ್ವರಮಂಗಲದಲ್ಲಿ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರ ಸಂಘದ ಶಾಖೆ ತೆರೆಯಲು ಕಾರಣಕರ್ತರಾದ ಸಂಘದ ಅಧ್ಯಕ್ಷ ಇಕ್ಬಾಲ್ ಎಲಿಮಲೆಯವರಿಗೆ ಗೌರವಾರ್ಪಣೆ



ಈಶ್ವರಮಂಗಲದಲ್ಲಿ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರ ಸಂಘದ ಶಾಖೆಯನ್ನು ತೆರೆಯಲು ಕಾರಣಕರ್ತರಾದ ಸಹಕಾರ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಇಕ್ಬಾಲ್ ಎಲಿಮಲೆ ಯವರನ್ನು ರಾಜ್ಯ ರೈತ ಸಂಘದ ವಿಭಾಗದ ಪರವಾಗಿ ಕರ್ನಾಟಕ ರಾಜ್ಯ ರೈತ ಸಂಘ ಬೆಂಗಳೂರು ಇದರ ರಾಜ್ಯ ಕಾರ್ಯದರ್ಶಿಯವರಾದ ಕೆ ಎಚ್ ಮೊಹಮ್ಮದ್ ಈಶ್ವರ ಮಂಗಲರವರು ಅಲ್ಪಸಂಖ್ಯಾತರ ಸಹಕಾರ ಸಂಘದ ಈಶ್ವರಮಂಗಲ ಶಾಖೆಯಲ್ಲಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಮುಖಂಡರಾದ ಅಬ್ದುಲ್ ರಹಿಮಾನ್ ಹಾಜಿ ಮೇನಾಲ, ಉದ್ಯಮಿಗಳಾದ ಖಾದರ್, ಹನೀಫ್ ಮೆತಡ್ಕ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಜ್ವಲ್ ನಾಯಕ್, ಸಿಬ್ಬಂದಿ ಅಬುಸಾಲಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!