ಕಾಂಗ್ರೆಸ್ ಪಕ್ಷದಲ್ಲಿ ಹಿಂಸೆ ತಾಳಲಾರದೆ ಬಿ.ಕೆ .ಹರಿಪ್ರಸಾದ್ ಏನೇನೋ ಹೇಳಿಕೆ ಕೊಡುತ್ತಿದ್ದಾರೆ-ಕಾರಜೋಳ
ಬಿ.ಕೆ .ಹರಿಪ್ರಸಾದ್ ಅವರ ಹೇಳಿಕೆಗಳಿಗೆ ಬೆಲೆ ಕೊಡುವ ಅಗತ್ಯವಿಲ್ಲ. ಅವರ ಮಾನಸಿಕ ಸ್ಥಿತಿ ಸರಿ ಇಲ್ಲ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.
![](https://newsbites.in/wp-content/uploads/2023/12/img_20231225_1604114580747768992101513.jpg)
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರಿಗೆ ಹಿಂಸೆ ಆಗುತ್ತಿದ್ದು, ಹಿಂಸೆ ತಾಳಲಾರದೆ ಏನೇನು ಹೇಳಿಕೆ ಕೊಡುತ್ತಿದ್ದಾರೆ, ಇದರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಮಾಜಿ ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಅಂತಹ ಪಕ್ಷಕ್ಕೆ ಯಾರು ಹೋಗಲಾರರು ಎಂದರು