ಭೀಕರ ಅಪಘಾತ: ಹೊತ್ತಿ ಉರಿದ ಬಸ್-ಕನಿಷ್ಠ 13 ಮಂದಿ ಸಜೀವ ದಹನ
ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ಸಿನಲ್ಲಿದ್ದ ಕನಿಷ್ಠ 13 ಮಂದಿ ಸಜೀವ ದಹನಗೊಂಡ ಘಟನೆ ಮಧ್ಯಪ್ರದೇಶದ ಗುನಾದಿಂದ ವರದಿಯಾಗಿದೆ.
![](https://newsbites.in/wp-content/uploads/2023/12/img_20231228_0956153737758334875080337.jpg)
ಈ ಭೀಕರ ಅಪಘಾತದಲ್ಲಿ ಹದಿನೇಳು ಮಂದಿ ಗಾಯಗೊಂಡಿದ್ದು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲು ಮಾಡಲಾನಿಗಿದೆ ಎಂದು ತಿಳಿದು ಬಂದಿದೆ.
ಮೃತದೇಹಗಳು ಸುಟ್ಟು ಕರಕಲಾಗಿದ್ದು, ಅವುಗಳನ್ನು ಗುರುತಿಸಲು ಡಿಎನ್ಎ ಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಘಟನೆಯ ವೇಳೆ ಬಸ್ನಲ್ಲಿ ಸುಮಾರು 30 ಪ್ರಯಾಣಿಕರಿದ್ದು ಅವರಲ್ಲಿ ನಾಲ್ವರು ಬಸ್ಸಿನಿಂದ ಜಿಗಿದು ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಘಟನೆಯ ತನಿಖೆಗೆ ಆದೇಶಿಸಿದ್ದಾರೆ.