ಕರಾವಳಿರಾಜಕೀಯರಾಜ್ಯ

ವಿಟ್ಲ ಅಂಬೇಡ್ಕರ್ ಭವನಕ್ಕೆ 1 ಕೋಟಿ ರೂ ಅನುದಾನ: ಪುತ್ತೂರು ಶಾಸಕರಿಗೆ ಭರವಸೆ ನೀಡಿದ ಸಚಿವ ಎಚ್ ಸಿ ಮಹದೇವಪ್ಪ



ಪುತ್ತೂರು: ವಿಟ್ಲದಲ್ಲಿ ನಿರ್ಮಾಣವಾಗಲಿರುವ ಅಂಬೇಡ್ಕರ್ ಭವನಕ್ಕೆ ರೂ 1 ಕೋಟಿ ಅನುದಾನ ನೀಡುವುದಾಗಿ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಪುತ್ತೂರು ಶಾಸಕರಿಗೆ ಭರವಸೆ ನೀಡಿದ್ದಾರೆ.

ಡಿ.27 ರಂದು ಪುತ್ತೂರು ಶಾಸಕರಾದ ಅಶೋಕ್ ರೈ ಹಾಗೂ ದಲಿತ ಸಂಘಟನೆಗಳ ಪ್ರಮುಖರು ಬೆಂಗಳೂರು ಡಾಲರ್ಸ್ ಕಾಲನಿಯಲ್ಲಿರುವ ಸಚಿವರ ನಿವಾಸಕ್ಕೆ ಭೇಟಿ ನೀಡಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ಅನುದಾನ ನೀಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ವಿಟ್ಲದಲ್ಲಿ ನಿರ್ಮಾಣವಾಗಲಿರುವ ಅಂಬೇಡ್ಕರ್ ಭವನಕ್ಕೆ ಒಂದು ಕೋಟಿ ಅನುದಾನ ನೀಡುವುದಾಗಿ ಶಾಸಕರಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಾಮಣ್ಣ ಪಿಲಿಂಜ, ಸೇಸಪ್ಪ ಬೆದ್ರಕಾಡು, ಚಂಧ್ರಶೇಖರ, ಪ್ರಸಾದ್, ಗಣೇಶ್, ಗುತ್ತಿಗೆದಾರರಾದ ಬಿ ಕೆ ಬಶೀರ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!