ಕರಾವಳಿ

ಸುಳ್ಯ: ಬ್ಯಾನರ್ ಹರಿದ ಕಿಡಿಗೇಡಿಗಳು



ಸುಳ್ಯದಲ್ಲಿ ಅಳವಡಿಸಿದ್ದ ಬೃಹತ್ ಬ್ಯಾನರನ್ನು ಹರಿದಿರುವ ಘಟನೆ ವರದಿಯಾಗಿದೆ. ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಗೆ ಮತ್ತು ಇನ್ನಿತರ ಕಾರ್ಯಕ್ರಮಗಳಿಗೆ ಶುಭ ಕೋರಿ ಹಾಕಿದ್ದ ಬ್ಯಾನರನ್ನು ಕಿಡಿಗೇಡಿಗಳು ಹರಿದಿದ್ದಾರೆ.ವರದಿಯಾಗಿದೆ.

ಸುಳ್ಯದ ಮುಖ್ಯರಸ್ತೆಯಲ್ಲಿ ಸುಳ್ಯ ಜಾತ್ರೆ , ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಹಾಗೂ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿ.ಎಂ.ಎಸ್. ನ ಬೆಳ್ಳಿಹಬ್ಬಕ್ಕೆ ಶುಭಕೋರಿ ಬೃಹತ್ ಬ್ಯಾನರನ್ನು ಬ್ಯಾನರ್ ಅಳವಡಿಕೆ ಮಾಡಲಾಗಿತ್ತು.

ಬ್ಯಾನರ್ ಹರಿದ ಘಟನೆಯನ್ನು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಖಂಡಿಸಿದ್ದು ಬ್ಯಾನರ್ ಹರಿದವರನ್ನು ಶೀಘ್ರವೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!