ಕರಾವಳಿ

ಸುಳ್ಯ: ಬ್ಯಾನರ್ ಹರಿದ ಪ್ರಕರಣ- ಮಾನಸಿಕ ಅಸ್ವಸ್ಥನಿಂದ ಕೃತ್ಯ..?



ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ, ಸುಳ್ಯ ಆಟೋ ರಿಕ್ಷಾ ಸಂಘದ ವತಿಯಿಂದ ಅಳವಡಿಸಿದ್ದ ಬ್ಯಾನರ್‌‌ನ ಮದ್ಯಬಾಗವನ್ನು, ಯಾರೋ ಹರಿದು ತೆಗೆದುಕೊಂಡು ಹೋಗಿರುವ ಬಗ್ಗೆ, ದಿನಾಂಕ:06.01.2024ರಂದು ಆಟೊ ರಿಕ್ಷಾ ಸಂಘದ ಅದ್ಯಕ್ಷರು ಸುಳ್ಯ ಪೊಲೀಸ್‌‌ ಠಾಣೆಯಲ್ಲಿ
ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಕೃತ್ಯವೆಸಗಿದವರ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದು ಮಹತ್ವದ ಅಂಶ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.

ಸುಳ್ಯದಲ್ಲಿರುವ ಸುಮಾರು 40 ಸಿಸಿ ಕ್ಯಾಮಾರಗಳ ಪೂಟೇಜ್‌‌ಗಳನ್ನು ಸುಳ್ಯ ಪೊಲೀಸರು ಪರಿಶೀಲನೆ ಮಾಡಿದಾಗ ಜ.5ರಂದು ಮಧ್ಯರಾತ್ರಿ ಮಾನಸಿಕ ಅಸ್ವಸ್ಥನಂತೆ ಕಂಡು ಬರುತ್ತಿರುವ ಅಪರಿಚಿತ ವಯಸ್ಸಾದ ವ್ಯಕ್ತಿಯೋರ್ವ ಬ್ಯಾನರ್ ಹರಿದು ತನ್ನ ಕೈಯಲ್ಲಿ ಹಿಡಿದುಕೊಂಡು, ಸುಳ್ಯ ಪೇಟೆಯಲ್ಲಿ ಸುತ್ತಾಡಿರುವುದು ತಿಳಿದು ಬಂದಿರುತ್ತದೆ. ಬಳಿಕ ಸುಳ್ಯದ ವಿವೇಕನಂದ ಸರ್ಕಲ್‌‌ ಬಳಿ ಹರಿದ ಬ್ಯಾನರ್ ತುಂಡನ್ನು ಇಟ್ಟು ರಾಮನ ಜಪ ಮಾಡಿದ್ದನ್ನು ಸಾರ್ವಜನಿಕರ ನೋಡಿರುವುದು ತನಿಖೆಯಿಂದ ತಿಳಿದು ಬಂದಿರುತ್ತದೆ. ಹರಿದ ಬ್ಯಾನರ್‌‌ ತುಂಡನ್ನು ಪರಿಶೀಲಿಸಲಾಗಿ ಅಯೋಧ್ಯೆಯ ಪೋಟೋಗಾಗಲಿ ಹಾಗೂ ಶ್ರೀರಾಮನ ಪೋಟೋಗಾಗಲಿ ಯಾವುದೇ ರೀತಿಯ ಹಾನಿಯಾಗಿರುವುದು ಕಂಡುಬಂದಿರುವುದಿಲ್ಲ. ತನಿಖೆ ಮುಂದುವರಿಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!