ಕರಾವಳಿರಾಷ್ಟ್ರೀಯ

ಸುಳ್ಯ: ಡಾ.ರೇಣುಕಾ ಪ್ರಸಾದ್ ಕೆ.ವಿ ಅವರಿಗೆ ಸುಪ್ರೀಂ ಕೋರ್ಟ್’ನಿಂದ ಜಾಮೀನು



ಸುಳ್ಯ: ಡಾ.ಕೆ.ವಿ.ರೇಣುಕಾ ಪ್ರಸಾದ್ ಕೆ.ವಿ.ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿದ್ದ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಡಾ.ಕೆ.ವಿ.ರೇಣುಕಾಪ್ರಸಾದ್ ಹಾಗೂ ಇತರ 4 ಮಂದಿಗೆ ಕರ್ನಾಟಕ ಹೈಕೋರ್ಟ್ ಕಳೆದ.ಅ.5ರಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.ಈ ಹಿನ್ನಲೆಯಲ್ಲಿ ಡಾ.ರೇಣುಕಾ ಪ್ರಸಾದ್ ಹಾಗೂ ಇತರ ಆರೋಪಿಗಳು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ ಜಾಮೀನು ಅರ್ಜಿ ಸಲ್ಲಿಸಿದ್ದರು.

ಸುಪ್ರೀಂ ಕೋರ್ಟ್‌ನಲ್ಲಿ ವಾದ ಪ್ರತಿವಾದ ನಡೆದಿತ್ತು.ಸುಪ್ರೀಂ ಕೋರ್ಟ್ ಡಾ.ರೇಣುಕಾಪ್ರಸಾದ್ ಹಾಗೂ ಇತರ ಆರೋಪಿಗಳಿಗೆ ಜ.8 ರಂದು ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!