ರಾಜಕೀಯರಾಷ್ಟ್ರೀಯ

ರಾಮಮಂದಿರ ಉದ್ಘಾಟನೆಯನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ: ರಾಹುಲ್ ಗಾಂಧಿ




ರಾಮಮಂದಿರ ಉದ್ಘಾಟನಾ ಕಾರ್ಯಕ್ರಮವನ್ನು ಬಿಜೆಪಿ ಮತ್ತು ಆರ್ ಎಸ್ ಎಸ್ ಸೇರಿ ಪ್ರಧಾನಿ ನರೇಂದ್ರ ಮೋದಿ ಕೇಂದ್ರಿತ ರಾಜಕೀಯ ಕಾರ್ಯಕ್ರಮವನ್ನಾಗಿಸಿದ್ದರಿಂದ, ಅದರಲ್ಲಿ ಪಾಲ್ಗೊಳ್ಳುವುದು ತಮ್ಮ ಪಕ್ಷದ ನಾಯಕರಿಗೆ ಕಷ್ಟದ ಕೆಲಸ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.


ಭಾರತ್ ಜೋಡೊ ನ್ಯಾಯ ಯಾತ್ರೆಯ ಭಾಗವಾಗಿ ನಾಗಾಲ್ಯಾಂಡ್ ಮೂಲಕ ಸಾಗಿದ ಜಾಥಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಚುನಾವಣೆಯ ಸ್ಪರ್ಶ ನೀಡಲಾಗಿದೆ. ಕಾಂಗ್ರೆಸ್ ಪಕ್ಷದ ಮುಖ್ಯ ವಿರೋಧಿ ಪಕ್ಷವಾಗಿರುವ ಬಿಜೆಪಿ ಮತ್ತು ಸಂಘಟನೆಯಾದ ಆರ್ ಎಸ್ ಎಸ್ ಈ ಕಾರ್ಯಕ್ರಮವನ್ನು ತಮ್ಮ ಚುನಾವಣಾ ಲಾಭಕ್ಕಾಗಿ ರಾಜಕೀಯಗೊಳಿಸಿದ್ದಾರೆ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!