ಕರಾವಳಿ

ಕುಂಬ್ರ: ನಾಯಿ ಕಚ್ಚಿ ಇಬ್ಬರಿಗೆ ಗಾಯ- ಆಸ್ಪತ್ರೆಗೆ ದಾಖಲು



ಪುತ್ತೂರು: ನಾಯಿ ಕಚ್ಚಿದ ಪರಿಣಾಮ ಇಬ್ಬರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜ.18ರಂದು ಕುಂಬ್ರ ಸಾರೆಪುಣಿ ಸಮೀಪದ ಗಟ್ಟಮನೆ ಎಂಬಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ

ಕುಂಬ್ರದ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಅಬೂಬಕ್ಕರ್ ಇದ್ಪಾಡಿ ಎಂಬವರು ಅಂಗಡಿಗೆ ಹೋಗುತ್ತಿದ್ದ ವೇಳೆ ಅಟ್ಟಾಡಿಸಿಕೊಂಡು ಬಂದ ನಾಯಿಯೊಂದು ಅವರ ಕಾಲಿಗೆ ಕಚ್ಚಿ ಗಾಯಗೊಳಿಸಿದೆ. ಕೂಡಲೇ ಸ್ಥಳೀಯರು ಅಬೂಬಕ್ಕರ್ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಇದೇ ಪರಿಸರದ ಮಹಿಳೆಯೋರ್ವರಿಗೂ ಅದೇ ನಾಯಿ ಕಚ್ಚಿ ಗಾಯಗೊಳಿಸಿದ್ದು ಅವರನ್ನು ಕೂಡ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹುಚ್ಚು ನಾಯಿ ಕಚ್ಚಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್ ಗೆ ಹಾಗೂ ಶಾಲೆಗಳಿಗೆ ಸಾಮಾಜಿಕ ಕಾರ್ಯಕರ್ತ ಅಶ್ರಫ್ ಸಾರೆಪುಣಿ ಮಾಹಿತಿ ನೀಡಿದ್ದಾರೆ. ನಾಯಿ ದಾಳಿಯಿಂದಾಗಿ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!