ಕುದ್ದುಪದವು: ಹೃದಯಾಘಾತದಿಂದ ಯುವಕ ನಿಧನ
ಪುತ್ತೂರು: ಯುವಕನೋರ್ವ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ವರದಿಯಾಗಿದೆ. ಕುದ್ದುಪದವು ನಿವಾಸಿ ನವೀನ್ ಕಿಶೋರ್ ಎಂಬವರು ಜ.30 ರ ನಸುಕಿನ ಜಾವ ಹೃದಯಾಘಾತದಿಂದ ನಿಧನರಾದರು.
![](https://newsbites.in/wp-content/uploads/2024/01/image_editor_output_image1733790499-1706586176643329439964520620743.jpg)
ಪುತ್ತೂರಿನ ಸುದ್ದಿ ಬಿಡುಗಡೆ ಪತ್ರಿಕೆಯ ಜಾಹಿರಾತು ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ನವೀನ್ ಕಿಶೋರ್ ಜ.29ರ ಸಂಜೆ ಮನೆಗೆ ಹೋದವರು ರಾತ್ರಿ ಶೌಚಾಲಯಕ್ಕೆ ಹೋದವರು ಅಲ್ಲಿ ಹೃದಯಾಘಾತಕ್ಕೀಡಾಗಿದ್ದಾರೆ.
ನವೀನ್ ಕಿಶೋರ್ ಅವರು ಶೌಚಾಲಯದಲ್ಲಿ ಕುಸಿದು ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಮನೆ ಮಂದಿ ಮತ್ತು ಸ್ಥಳೀಯರು ಸೇರಿ ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ನವೀನ್ ಕಿಶೋರ್ ಆಗಲೇ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಮೃತರು ತಾಯಿ, ಸಹೋದರ ಮತ್ತು ಸಹೋದರಿಯರನ್ನು ಅಗಲಿದ್ದಾರೆ.