ಕರಾವಳಿ

ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಆಡಳಿತ ಸಮಿತಿ ನಿಯೋಗದಿಂದ ಗಣ್ಯರ ಭೇಟಿ



ಪುತ್ತೂರು: ಮರ್ಕಝುಲ್ ಹುದಾ ಮಹಿಳಾ ಕಾಲೇಜು ಕುಂಬ್ರ ಇದರ ಆಡಳಿತ ಸಮಿತಿ ಪದಾಧಿಕಾರಿಗಳ ನಿಯೋಗವು ಸ್ಪೀಕರ್ ಯು.ಟಿ.ಖಾದರ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯ ಡಾ.ಇಫ್ತಿಕಾರ್‌ರವರನ್ನು ಭೇಟಿಯಾಗಿ ಸಂಸ್ಥೆಯ ಅಭಿವೃದ್ಧಿ ಮತ್ತು ಕಾರ್ಯವಿಧಾನಗಳ ಬಗ್ಗೆ ಮಾಹಿತಿ ನೀಡಲಾಯಿತು.

ಸಮಿತಿಯ ಕಾರ್ಯಯೋಜನೆಗಳಿಗೆ ಸಂಸ್ಥೆಯೊಂದಿಗೆ ಕೈ ಜೋಡಿಸುವುದಾಗಿ ನಾಯಕರು ನಿಯೋಗಕ್ಕೆ ಭರವಸೆ ನೀಡಿದರು. ಈ ವೇಳೆ ಆಡಳಿತ ಮಂಡಳಿಯ ಅಧ್ಯಕ್ಷ ಅಬ್ದುಲ್ ರಹ್ಮಾನ್ ಹಾಜಿ ಅರಿಯಡ್ಕ, ಉಪಾಧ್ಯಕ್ಷ ಡಾ.ಎಂಎಸ್‌ಎಂ ಅಬ್ದುಲ್ ರಶೀದ್ ಝೈನಿ, ಪ್ರ.ಕಾರ್ಯದರ್ಶಿ ಬಶೀರ್ ಇಂದ್ರಾಜೆ, ಕೋಶಾಧಿಕಾರಿ ಯೂಸುಫ್ ಗೌಸಿಯಾ ಸಾಜ, ಗಲ್ಫ್ ಸಂಚಾಲಕ ಶಂಸುದ್ದೀನ್ ಬೈರಿಕಟ್ಟೆ, ಕಾರ್ಯದರ್ಶಿ ಯೂಸುಫ್ ಮೈದಾನಿಮೂಲೆ, ಆಡಿಟರ್ ಅನ್ವರ್ ಹುಸೇನ್ ಗೂಡಿನಬಳಿ, ಪುತ್ತೂರು ನಗರಸಭಾ ಮಾಜಿ ಸದಸ್ಯ ಅಧ್ಯಕ್ಷ ಎಚ್ ಮಹಮ್ಮದ್ ಆಲಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!