ಕರಾವಳಿಕ್ರೈಂ

ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ ನಗದು, ಚಿನ್ನಾಭರಣ ಕಳ್ಳತನ



ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳ ನುಗ್ಗಿನ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ನಗದು ಹಣ ಎಗರಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ಫೆ.6ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. 

ಮುಸ್ತಾಫ್ ಎಂಬವರ ಮನೆಯಲ್ಲಿ ಈ ಕಳವು ಕೃತ್ಯ ನಡೆದಿದೆ. ಮುಸ್ತಾಫ್ ಅವರು ತನ್ನ ಗೂಡ್ಸ್ ವಾಹನದ ಸರ್ವಿಸ್ ಗಾಗಿ ಚಿಕ್ಕಮಗಳೂರಿಗೆ ತೆರಳಿದ್ದವರು, ಆ ದಿನ ಅವರು ಅಲ್ಲಿಯೇ ತಂಗಿದ್ದಾರೆ. ಅವರ ಬೆಳ್ತಂಗಡಿಯ ಮನೆಯಲ್ಲಿದ್ದ ಅವರ ತಾಯಿ ಕೂಡಾ ಆ ದಿನ ರಾತ್ರಿ ಮನೆಗೆ ಬೀಗ ಹಾಕಿ ಹತ್ತಿರದಲ್ಲಿರುವ ಮುಸ್ತಫಾ ಅವರ ಚಿಕ್ಕಪ್ಪನ ಮನೆಗೆ  ತೆರಳಿದ್ದರು. ಮರುದಿನ ಬೆಳಿಗ್ಗೆ ಮುಸ್ತಾಫ್ ಅವರ ತಾಯಿ ಮನೆಗೆ ಬಂದು ನೋಡಿದಾಗ ಮನೆಯ ಹಂಚು ತೆರೆದು ಒಳನುಗ್ಗಿದ ಕಳ್ಳರು ಮನೆಯ ರೂಮಿನ ಗಾಡ್ರೇಜ್ ಕಪಾಟಿನಲ್ಲಿರಿಸಿದ್ದ 1.71 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ರೂಪಾಯಿ ನಗದು ಹಣವನ್ನು ಕಳವುಗೈದಿರುವುದು ಬೆಳಕಿಗೆ ಬಂದಿದೆ. 

ಈ ಬಗ್ಗೆ ಮುಸ್ತಾಫ್ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Leave a Reply

Your email address will not be published. Required fields are marked *

error: Content is protected !!