ರಾಜಕೀಯರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ದ ಮತ್ತೊಮ್ಮೆ ಗುಡುಗಿದ ಯತ್ನಾಳ್



ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ದ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ವಿಜಯೇಂದ್ರ ಜೊತೆ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಪ್ಪ-ಮಕ್ಕಳ ಜೊತೆಗೆ ನಾನು ರಾಜಿಯಾಗಬೇಕಾ? ನನಗೆ ರಾಜಿ ಅವಶ್ಯಕತೆ ಇಲ್ಲ. ಬಿ.ವೈ.ವಿಜಯೇಂದ್ರರಿಂದ ನನಗೇನೂ ಆಗಬೇಕಾಗಿಲ್ಲ. ವಿಜಯೇಂದ್ರ ಜತೆ ನನ್ನದು ಯಾವುದೇ ವ್ಯವಹಾರವಿಲ್ಲ. ನರೇಂದ್ರ ಮೋದಿ ಮತ್ತೆ ಪ್ರಧಾನಮಂತ್ರಿ ಆಗಬೇಕಷ್ಟೇ ಎಂದು ತಿಳಿಸಿದ್ದಾರೆ.

ಮಾಜಿ ಸಿಎಂ ಬೊಮ್ಮಾಯಿ ಸೋಲಿಸುವುದಕ್ಕೆ ಏನು ಮಾಡಿದ್ದಾರೆ. ಇವರ ಇತಿಹಾಸ ಗೊತ್ತಿದೆ. ಲೋಕಸಭೆ ಚುನಾವಣೆ ಬಳಿಕ ಹೇಳುತ್ತೇನೆ ಎಂದು ಗುಡುಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!