ಕರಾವಳಿಕ್ರೈಂ

ರಾಮಕುಂಜ: ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನ, ನಗದು ದೋಚಿದ ಕಳ್ಳರು



ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಳಿತ್ತಡಿ ನಿವಾಸಿ ನೆಬಿಸಾ ಎಂಬವರ ಮನೆಯಿಂದ ಚಿನ್ನ ಹಾಗೂ ನಗದು ಕಳ್ಳತನ ಆಗಿರುವ ಘಟನೆ ನಡೆದಿದೆ.

ಸಾಂದರ್ಭಿಕ ಚಿತ್ರ

ನೆಬಿಸಾ ಅವರ ಪುತ್ರಿ ಹೆರಿಗೆ ಹಿನ್ನೆಲೆಯಲ್ಲಿ, ಪುತ್ರಿಯೊಂದಿಗೆ ನೆಬಿಸಾ ಹಾಗೂ ಅವರ ಅಳಿಯ ಮಂಗಳೂರಿನ ಆಸ್ಪತ್ರೆಗೆ ತೆರಳಿದ್ದರು. ಕಳೆದ ನಾಲ್ಕೈದು ದಿನಗಳಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಮಾ.11ರಂದು ಸಂಜೆ ಮನೆಗೆ ಬಂದಾಗ ಮನೆಯ ಹಿಂಬದಿಯ ಬಾಗಿಲು ಮುರಿದ ಸ್ಥಿತಿಯಲ್ಲಿದ್ದು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.


ಮನೆಯ ರೂಮಿನ ಕಪಾಟಿನಲ್ಲಿಟ್ಟಿದ್ದ ರೂ 1,08,000/ ನಗದು ಹಾಗೂ ಸುಮಾರು 13 ಪವನ್‌ ಚಿನ್ನಾಭರಣ ( ಅಂದಾಜು ರೂ 5,20,000/-ಮೌಲ್ಯ) ಗಳನ್ನು ಕಳ್ಳರು ಕಳ್ಳತನ ಮಾಡಿರುವುದು ಕಂಡು ಬಂದಿರುತ್ತದೆ. ನೆಬಿಸ ಅವರ ಪುತ್ರ ಸಿದ್ದೀಕ್ ಎಂಬವರು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!