ಕೈ ತಪ್ಪಿದ ಟಿಕೆಟ್: ನಳಿನ್ ಪ್ರತಿಕ್ರಿಯೆ
ಲೋಕಸಭಾ ಚುನಾವಣೆಯಲ್ಲಿ ದ.ಕ ಕ್ಷೇತ್ರದಿಂದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ಕೈ ತಪ್ಪಿದ್ದು ಈ ಬಗ್ಗೆ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯಿಸಿದ್ದಾರೆ.
![](https://newsbites.in/wp-content/uploads/2024/03/img_20240312_1242383282785318161666041.jpg)
ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಬ್ರಿಜೇಶ್ ಚೌಟಾಗೆ ಅಭಿನಂದಿಸುವೆ. ಕಳೆದ 15 ವರ್ಷಗಳಿಂದ ಪಕ್ಷ ನನಗೆ ಅವಕಾಶವನ್ನ ಕೊಟ್ಟಿದೆ. ಮತದಾರರು 15 ವರ್ಷಗಳಿಂದ ಆಶೀರ್ವಾದ ಮಾಡಿದ್ದಾರೆ. ರಾಜಕಾರಣಕ್ಕೆ ಯುವಕರು ಬರಬೇಕು. ಪಕ್ಷ ತೆಗೆದುಕೊಂಡಿರುವ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.