ಕರಾವಳಿರಾಜಕೀಯರಾಜ್ಯ

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಗೆ ಸೇರ್ಪಡೆ



ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಹಾಗೂ ಬಿಜೆಪಿ ನಡುವಿನ ವಿವಾದ ಸುಖಾಂತ್ಯಗೂಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ವಿಜಯೇಂದ್ರ ಸಮ್ಮುಖದಲ್ಲಿ ಮಾ.14ರಂದು ಬೆಂಗಳೂರಿನಲ್ಲಿ ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಬೆಂಗಳೂರಿನಲ್ಲಿ ಪುತ್ತಿಲ ಪರಿವಾರದ ಪ್ರಮುಖರಾದ ಅರುಣ್ ಪುತ್ತಿಲ, ಪ್ರಸನ್ನ ಮಾರ್ತಾ, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕಷ್ಣ ಆಳ್ವ , ನಗರ ಮಂಡಲ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ ಮತ್ತಿತರರು ಬೆಂಗಳೂರಿಗೆ ತೆರಳಿದ್ದು ಬಿಜೆಪಿ ಕಛೇರಿಯಲ್ಲಿ ಪುತ್ತಿಲ ಬಿಜೆಪಿ ಸೇರ್ಪಡೆಯಾದರು.

ಕಳೆದ ವಿಧಾನ ಸಭೆ ಚುನಾವಣೆ ಸಂದರ್ಭ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಬಿಜೆಪಿಯನ್ನು ತೃತೀಯ ಸ್ಥಾನಕ್ಕೆ ತಳ್ಳಿದರು.‌

Leave a Reply

Your email address will not be published. Required fields are marked *

error: Content is protected !!