ಕರಾವಳಿ

ಅಪ್ರಾಪ್ತ ಬಾಲಕನನ್ನು ಥಳಿಸಿದ ಆರೋಪಿಗೆ ದಂಡ, ಜೈಲು ಶಿಕ್ಷೆ

ಪುತ್ತೂರು: 2018ರಲ್ಲಿ ಬಂಟ್ವಾಳ ತಾಲೂಕಿನ ಪೆರ್ನೆ ಬಲತೋಟ ಮನೆ ಆಮ್ಕೆ ಎಂಬಲ್ಲಿ ಸಿ ಚಾರ್ಲಿ ಮೇನೇಜಸ್ ಎಂಬ ಆರೋಪಿ ಅಪ್ರಾಪ್ತ ಬಾಲಕನನ್ನು ಥಳಿಸಿ ಗಾಯಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಒಂದೂವರೆ ವರ್ಷ ಜೈಲು ಶಿಕ್ಷೆ ಮತ್ತು 3 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ಪುತ್ತೂರು ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಎಚ್ ಆರ್ ಶಿವಣ್ಣ ಮಾರ್ಚ್ 21ರಂದು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದ್ದಾರೆ.
ಸರಕಾರದ ಪರವಾಗಿ ಎ ಪಿ ಪಿ ಕವಿತಾ ವಾದ ಮಂಡಿಸಿದರು.

Leave a Reply

Your email address will not be published. Required fields are marked *

error: Content is protected !!