ಕರಾವಳಿ

ಕುಂಬ್ರ: ರಸ್ತೆಗೆ ಬಿದ್ದ ಮರ



ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂಬ್ರ ಸಮೀಪದ ಶೇಖಮಲೆಯಲ್ಲಿ ಬೃಹತ್ ಗಾತ್ರದ  ಮರವೊಂದು ಬುಡದಿಂದ ಮುರಿದು ರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ಮಾ.22 ರಂದು ಮಧ್ಯಾಹ್ನ ನಡೆದಿದೆ.

ಮರ ಬೀಳುವ ಸಂದರ್ಭದಲ್ಲಿ ಯಾವುದೇ ವಾಹನಗಳ ಸಂಚಾರ ಇಲ್ಲದ ಕಾರಣದಿಂದ ಅನಾಹುತ ತಪ್ಪಿದೆ. ರಸ್ತೆಗೆ ಅಡ್ಡಲಾಗಿ ಮರ ಬಿದ್ದಿರುವುದರಿಂದ ಕೆಲಹೊತ್ತು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ನಂತರ ಮೆಷಿನ್ ಮೂಲಕ ಮರವನ್ನು ಕತ್ತರಿಸಿ ಸ್ಥಳೀಯರ ಸಹಕಾರದೊಂದಿಗೆ ತೆರವುಗೊಳಿಸಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಯಿತು.

Leave a Reply

Your email address will not be published. Required fields are marked *

error: Content is protected !!