ಕರಾವಳಿ

ಎನ್‌ಎಸ್‌ಯುಐ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾಗಿ ಎಡ್ವರ್ಡ್ ಆಯ್ಕೆ



ಪುತ್ತೂರು: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಎನ್‌ಎಸ್‌ಯುಐ ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಎಡ್ವರ್ಡ್ ಪುತ್ತೂರುರವರನ್ನು ಆಯ್ಕೆಯಾಗಿದ್ದಾರೆ.

ಎನ್‌ಎಸ್‌ಯುಐ ಜಿಲ್ಲಾ ಉಸ್ತುವಾರಿಗಳಾದ ಝಕೀರ್ ಹುಸೈನ್ ಮತ್ತು ಭರತ್ ರಾಮ್ ರವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಎಡ್ವರ್ಡ್‌ರವರು ಪ್ರಸ್ತುತ ಪುತ್ತೂರಿನ ಸರಕಾರಿ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿದ್ದು NSUI ವಿದ್ಯಾರ್ಥಿ ಸಂಘಟನೆಯಲ್ಲಿ 6 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಅಮ್ಮಿನಡ್ಕ ನಿವಾಸಿ ಮಿಂಗಲ್ ಡಿಸೋಜ ಮತ್ತು ಗ್ರೇಸಿ ಡಿಸೋಜ ದಂಪತಿಯ ಪುತ್ರ.

ಪುತ್ತೂರಿನ ವಿವಿಧೆಡೆ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಎದುರಾದಾಗ ಮುಂದೆ ಬಂದು ಈ ಬಗ್ಗೆ KSRTC ಪ್ರಮುಖರ ಜೊತೆ ಮಾತನಾಡಿ, ಹೆಚ್ಚುವರಿ ಬಸ್‌ಗಳಿಗಾಗಿ ಕೊನೆವರೆಗೂ ಹೋರಾಟ ನಡೆಸಿದ ಹೆಗ್ಗಳಿಕೆ ಇವರಿಗಿದೆ.

Leave a Reply

Your email address will not be published. Required fields are marked *

error: Content is protected !!