ಕರಾವಳಿರಾಜಕೀಯ

ಪುತ್ತೂರು: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸಭೆ



ಪುತ್ತೂರು: ಬಿಜೆಪಿ ಪುತ್ತೂರು ಮಂಡಲದಲ್ಲಿ ಮಂಡಲದ ಅಧ್ಯಕ್ಷರಾದ ರಾಮಕೃಷ್ಣ ಆಳ್ವರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸಭೆ ನಡೆಯಿತು.

ಲೋಕಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಅಲ್ಪಸಂಖ್ಯಾತ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರರ ಮತವನ್ನು ಪಡೆದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ರನ್ನು ಲಕ್ಷಾಂತರ ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಪುತ್ತೂರು ಮಾಜಿ ಶಾಸಕರಾದ ಸಂಜೀವ ಮಠಂದೂರು, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸಂಚಾಲಕರಾದ ಚನಿಲ ತಿಮ್ಮಪ್ಪ ಶೆಟ್ಟಿ, ಸಹ ಸಂಚಾಲಕರಾದ ಉಮೇಶ್, ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉಪಾದ್ಯಕ್ಷರು, ಕೆ.ಎಂ.ಡಿ.ಸಿ ಮಾಜಿ ಅಧ್ಯಕ್ಷರದ ಅಬೂಬಕ್ಕರ್ ಎನ್.ಬಿ, ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ಸಂಚಾಲಕ ರಫೀಕ್ ದರ್ಬೆ, ಪ್ರಮುಖ ಕಾರ್ಯಕರ್ತರಾದ ಉಮ್ಮರಬ್ಬ ಕೆದಿಲ , ರಜಾಕ್ ಕೆ.ಜಿ.ಎನ್, ಉಸ್ಮಾನ್, ಸೌಕಾತ್ ಅಲಿ, ಅನ್ಸಾರ್ , ಖಾದರ್ ಕರ್ನೂರು, ಅಬ್ದುಲ್ ರಜಾಕ್, ಇನ್ನಿತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!