ಅಂತಾರಾಷ್ಟ್ರೀಯ

ಉಮ್ರಾ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಮೃತ್ಯು

ಪವಿತ್ರ ಉಮ್ರಾ ಯಾತ್ರೆಗಾಗಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಮೃತಪಟ್ಟಿರುವ  ದಾರುಣ ಘಟನೆ ನಡೆದಿದೆ. ಮದೀನಾ ಸಮೀಪ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮುಂಡಗೋಡ ನಿವಾಸಿಗಳಾದ ಫಯಾಜ್ ರೋಣ, ಪತ್ನಿ ಆಫ್ರಿನಾ ಬಾನು, ಸಹೋದರನ ಮಗ ಆಯಾನ್ ರೋಣ ಮೃತಪಟ್ಟವರು. ಉಮ್ರಾ ಯಾತ್ರೆಗೆಂದು ಮಾ.26ರಂದು ಅವರು ಇತರರ ಜೊತೆ ಮಕ್ಕಾಕ್ಕೆ ಹೊರಟು ಮದೀನದಲ್ಲಿ ಪ್ರಯಾಣಿಸುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಇಬ್ಬರು ಮಕ್ಕಳು ಹಾಗೂ ಇನ್ನೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!