ಕರಾವಳಿ

1.50 ಲಕ್ಷದಿಂದ 2 ಲಕ್ಷ ನೋಟಾ ಮತ ಬೀಳುವ ಸಾಧ್ಯತೆ: ತಿಮರೋಡಿ



ಪುತ್ತೂರು:  ಸೌಜನ್ಯ ಅವರ ಸಾವಿಗೆ ಈವರೆಗೆ ನ್ಯಾಯ ಸಿಕ್ಕಿಲ್ಲ. ಈಗಾಗಲೇ ರಾಜ್ಯದಾದ್ಯಂತ ನಿರಂತರ ಹೋರಾಟಗಳನ್ನು ನಡೆಸುತ್ತಿದ್ದೇವೆ, ಈ ಹೋರಾಟದ ಮುಂದಿನ ಭಾಗವಾಗಿ ಚುನಾವಣೆಯಲ್ಲಿ ಈ ಬಾರಿ ನೋಟಾ ಅಭಿಯಾನವನ್ನು ಆರಂಭಿಸಿದ್ದೇವೆ ಎಂದು ಸೌಜನ್ಯ ಪರ ಹೋರಾಟ ಸಮಿತಿ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ.

ಪುತ್ತೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನೋಟಾ ಕ್ಕೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ನೋಟಾ ಮತವನ್ನು ಅತೀ ಹೆಚ್ಚು ಚಲಾಯಿಸುವ ಮೂಲಕ ನಮಗೆ ನ್ಯಾಯ ಪಡೆದುಕೊಳ್ಳುತ್ತೇವೆ. ಈ ಬಾರಿ ಸುಮಾರು 1.50 ಲಕ್ಷದಿಂದ 2 ಲಕ್ಷಕ್ಕೂ ಮಿಕ್ಕಿ ನೋಟಾ ಮತ ಬೀಳುವ ಸಾಧ್ಯತೆಯಿದೆ ಎಂದರು.

Leave a Reply

Your email address will not be published. Required fields are marked *

error: Content is protected !!