ರಾಜಕೀಯರಾಜ್ಯ

ಬಿಜೆಪಿಗೆ ಸಂಗಣ್ಣ ಕರಡಿ ರಾಜೀನಾಮೆ

ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ಕರಡಿ ಸಂಗಣ್ಣ ಅವರು ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಪತ್ರವನ್ನು ಸಲ್ಲಿಕೆ ಮಾಡಿದ್ದು, ಇದನ್ನು ಅಂಗೀಕಾರ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಕೊಪ್ಪಳ ಲೋಕಸಭಾ ಕ್ಷೇತ್ರದ ಹಾಲಿ ಸಂಸದರೂ ಆಗಿದ್ದ ಕರಡಿ ಸಂಗಣ್ಣ ಅವರಿಗೆ ಈ ಬಾರಿ ಲೋಕಸಭೆ ಟಿಕೆಟ್ ನಿರಾಕರಿಸಲಾಗಿತ್ತು. ಇದರಿಂದ ಆರಂಭದಿಂದಲೂ ಅಸಮಾಧಾನ ಹೊರ ಹಾಕಿದ್ದ ಕರಡಿ ಸಂಗಣ್ಣ ಅವರು, ನಮ್ಮ ಲೋಕಸಭಾ ಟಿಕೆಟ್‌ ಅನ್ನು ಪುನಃ ಬದಲಾಯಿಸಿ ತಮಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದರು. ಆದರೆ ಇದಕ್ಕೆ ಬಿಜೆಪಿ ಹೈಕಮಾಂಡ್ ಆಗಲೀ ರಾಜ್ಯ ಬಿಜೆಪಿ ನಾಯಕರಾಗಲಿ ಕ್ಯಾರೆ ಅಂದಿಲ್ಲ. ಇದರಿಂದ
ಅಸಮಾಧಾನಗೊಂಡ ಸಂಸದ ಕರಡಿ ಸಂಗಣ್ಣ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!