ಕರಾವಳಿರಾಜಕೀಯರಾಜ್ಯ

ಗ್ಯಾರಂಟಿ ಯೋಜನೆಗಳಿಂದ ಜನರು ನೆಮ್ಮದಿಯ ಜೀವನ ನಡೆಸುವಂತಾಗಿದೆ: ಅಶೋಕ್ ರೈ



ಪುತ್ತೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ನೀಡಿದ 5 ಗ್ಯಾರಂಟಿಗಳಿಂದ ಜನರು ನೆಮ್ಮದಿಯ ಜೀವನ ನಡೆಸುವಂತಾಗಿದ್ದು ಇಡೀ ಕರ್ನಾಟಕ ಬಡತನ ಮುಕ್ತವಾಗಲಿದೆ. ಜನರ ಕಷ್ಟ, ಕಾರ್ಪಣ್ಯಗಳಿಗೆ ಸದಾ ಸ್ಪಂದಿಸಿ, ಬಡ ಜನರ ಕಣ್ಣೀರು ಸದಾ ಒರೆಸುವುದೇ ನಮ್ಮ ಸರಕಾರದ ಕೆಲಸ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಕಲ್ಪನೆ ಸಮುದಾಯ ಭವನದಲ್ಲಿ ನಡೆದ ಸರ್ವೆ ವಲಯ ಕಾಂಗ್ರೆಸ್  ಕಾರ್ಯಕರ್ತ ಸಭೆಯಲ್ಲಿ ಅವರು ಮಾತನಾಡಿದರು.

 ಧರ್ಮಗಳ ಮಧ್ಯೆ ಕಚ್ಚಾಟ ಮಾಡಿಸಿ ಸಮುದಾಯವನ್ನು ಸಂಘರ್ಷ ಮಾಡಿಸಿದ್ದೇ ಬಿ.ಜೆ.ಪಿ ಸಾಧನೆ ಎಂದ ಅವರು ಬಡ ಜನರಿಗೆ, ಮಹಿಳೆಯರಿಗೆ ನಮ್ಮ ಸರಕಾರ 5 ಗ್ಯಾರಂಟಿ ಕೊಟ್ಟಿದೆ. ನಿಮ್ಮ ಸರಕಾರ ಜನರಿಗೆ ಏನು ಕೊಟ್ಟಿದೆ ಎಂದು ತಿಳಿಸಿ ಎಂದು ಬಿಜೆಪಿಗೆ ಪ್ರಶ್ನೆ ಮಾಡಿದರು.  ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರನ್ನು ಗೆಲ್ಲಿಸಲು ನೀವೆಲ್ಲರೂ ಶ್ರಮಪಡಬೇಕು ಎಂದು ಅವರು ಹೇಳಿದರು. ಸರ್ವೆ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಡಿ.ವಸಂತ ಅಧ್ಯಕ್ಷತೆ ವಹಿಸಿದ್ದರು.

ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷ  ಎಂ.ಬಿ ವಿಶ್ವನಾಥ ರೈ,  ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮಹಮ್ಮದ್, ಪ್ರಚಾರ ಉಸ್ತುವಾರಿ ಹೇಮನಾಥ ಶೆಟ್ಟಿ ಕಾವು, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಕೂರ್ ಹಾಜಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಲ ರಾಮಚಂದ್ರ , ಉಸ್ತುವಾರಿಗಳಾದ ಶಶಿಕಿರಣ್ ರೈ, ಮಹೇಶ್ ರೈ ಅಂಕೊತ್ತಿಮಾರ್ ಮುಂತಾದವರು ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರುಗಳು , ಬೂತ್ ಅದ್ಯಕ್ಷರುಗಳು ಹಾಗು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ವಲಯ ಕಾರ್ಯದರ್ಶಿ ಸಿದ್ದೀಕ್ ಸುಲ್ತಾನ್ ಸ್ವಾಗತಿಸಿ , ಬ್ಲಾಕ್ ಕಾರ್ಯದರ್ಶಿ ರಾಮಚಂದ್ರ ಸೊರಕೆ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!