ರಾಜಕೀಯರಾಷ್ಟ್ರೀಯ

ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಮೋದಿಯವರಿಗೂ ಗೊತ್ತಾಗಿದೆ-ಸಿದ್ದರಾಮಯ್ಯ

ಕರ್ನಾಟಕದಲ್ಲಿ 12 ಜನ ಹಾಲಿ ಸಂಸದರಿಗೆ ಟಿಕೆಟ್ ಕೊಟ್ಟಿಲ್ಲ. ನರೇಂದ್ರ ಮೋದಿಯವರಿಗೆ ವಿಶ್ವಾಸ ಇದ್ದಿದ್ದರೆ ಇಷ್ಟೊಂದು ಬದಲಾವಣೆ ಏಕೆ ಮಾಡಬೇಕಿತ್ತು? ಬಿಜೆಪಿ ಸಮೀಕ್ಷಾ ವರದಿಯೊಂದರ ಪ್ರಕಾರ ತಮ್ಮ ಪಕ್ಷ 200 ಸ್ಥಾನಗಳನ್ನು ಗೆದ್ದರೆ ಹೆಚ್ಚು ಎನ್ನುವುದು ಪ್ರಧಾನಿ ಮೋದಿಯವರಿಗೂ ಗೊತ್ತಾಗಿದೆ. ಅದಕ್ಕಾಗಿ ಇಡೀ ರಾಷ್ಟ್ರದಲ್ಲಿ ನೂರಕ್ಕೂ ಹೆಚ್ಚು ಜನರಿಗೆ ಟಿಕೆಟ್ ಬದಲಾಯಿಸುವ ಕೆಲಸವನ್ನು ಬಿಜೆಪಿ ಮಾಡಿದೆ. ಅವರು ಸೋಲುವ ಭಯದಿಂದ ಹೀಗೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಿರುದ್ಯೋಗ, ಬೆಲೆಯೇರಿಕೆ, ಹಣದುಬ್ಬರ, ರೈತರ, ಮಹಿಳೆಯರ ಸಮಸ್ಯೆಗಳ ಬಗ್ಗೆ ಮೋದಿ ಚರ್ಚೆ  ಮಾಡುವುದಿಲ್ಲ. ಅಭಿವೃದ್ಧಿ ಮಾಡಿದ್ದೇನೆ ಎಂದು ಮಾತ್ರ ಹೇಳುತ್ತಾರೆ. ಏನು ಮಾಡಿದ್ದೇವೆ ಎಂದು ಹೇಳುವುದಿಲ್ಲ,  ಅವರಿಗೂ ಅದು ಗೊತ್ತಿದ್ದಂತೆ ಕಾಣುತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!