ಪ್ರಜ್ವಲ್ ರೇವಣ್ಣರನ್ನು ಹೆಚ್ಡಿ ದೇವೇಗೌಡರೇ ವಿದೇಶಕ್ಕೆ ಕಳುಹಿಸಿದ್ದಾರೆ- ಸಿದ್ದರಾಮಯ್ಯ ಆರೋಪ
ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣರನ್ನು ಹೆಚ್ಡಿ ದೇವೇಗೌಡರೇ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎಲ್ಲ ವಿಚಾರ ಗೊತ್ತಿದ್ದರೂ ಪ್ರಜ್ವಲ್ಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಯಾಕೆ ಟಿಕೆಟ್ ಕೊಟ್ಟಿದ್ದರು ಎಂದು ಅವರು ಪ್ರಶ್ನಿಸಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾದ ವೇಳೆ ಮಾತನಾಡಿದ ಅವರು, ವೀಸಾ ಕೊಡುವುದು ಯಾರು? ಕೇಂದ್ರದ ಬಿಜೆಪಿಯವರೇ ತಾನೇ ಎಂದು ಪ್ರಶ್ನಿಸಿದರು. ಅಲ್ಲದೆ, ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ಸಂಬಂಧ ಇಲ್ಲ ಎಂದು ಅವರು ಹೇಳಿದರು.