ಕರಾವಳಿಕ್ರೈಂ

ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ಕೆರೆಗೆ ಬಿದ್ದು ಮೃತ್ಯು

ಬೆಳ್ತಂಗಡಿ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ತೋಟದ ಕೆರೆಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದ ಮುಳ್ಳಿಕಾರ್‌ನಲ್ಲಿ ಮೇ.2ರಂದು ನಡೆದಿದೆ.

ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪಟ್ಟೋಡಿ ನಿವಾಸಿ ಜಗದೀಶ್ ಎಂಬವರ ಪುತ್ರ ಪ್ರಣಿತ್ ಕುಮಾರ್ (1ವರ್ಷ 9 ತಿಂಗಳು) ಮೃತಪಟ್ಟ ಮಗು.

ಸಾಂದರ್ಭಿಕ ಚಿತ್ರ

ಜಗದೀಶ್ ಅವರ ಪತ್ನಿ ಪ್ರತಿ ದಿನ ತೋಟಕ್ಕೆ ನೀರು ಬಿಡಲೆಂದು ಸಂಗ್ರಹಿಸಿರುವ ಕೆರೆಗೆ ಬಟ್ಟೆ ತೊಳೆಯಲು ಹೋಗುತ್ತಿದ್ದು ಈ ವೇಳೆ ಪ್ರಣಿತ್ ಕುಮಾರ್‌ನನ್ನುಕೆರೆಯ ಬಳಿ ಕರೆದುಕೊಂಡು ಹೋಗುತ್ತಿದ್ದರು. ಮೇ 2 ರಂದು ಸಂಜೆ ಮನೆಯವರು ಒಳಗಡೆ ಇದ್ದು, ಈ ವೇಳೆ ಪ್ರಣಿತ್ ಕುಮಾರ್ ಮನೆಯ ಹೊರಗಡೆ ಆಟವಾಡಿಕೊಂಡಿದ್ದ. ನಂತರ ಮನೆಯವರು ಬಂದು ನೋಡಿದಾಗ ಅಂಗಳದಲ್ಲಿ ಆಟವಾಡುತ್ತಿದ್ದ ಪ್ರಣಿತ್ ನಾಪತ್ತೆಯಾಗಿದ್ದ.

ಮನೆಯ ಸುತ್ತಮುತ್ತಲೂ ಹುಡುಕಾಟ ನಡೆಸಿ, ನಂತರ ಮಗು ಕೆರೆಯ ಬಳಿ ಹೋಗಿರಬಹುದು ಎಂದು ಸಂಶಯಗೊಂಡು ತೋಟದಲ್ಲಿರುವ ಕೆರೆಯ ಬಳಿಗೆ ಬಂದು ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಪ್ರಣಿತ್‌ನ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!