ಕರಾವಳಿಕ್ರೈಂ

ಆಟೋ ರಿಕ್ಷಾ-ಬೈಕ್ ಅಪಘಾತದ ವೇಳೆ ರಿಕ್ಷಾದಿಂದ ರಸ್ತೆಗೆಸೆಯಲ್ಪಟ್ಟು ಯುವಕ ಮೃತ್ಯು



ಬಂಟ್ವಾಳ: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು  ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮೇ.20ರಂದು ಸಂಜೆ ಪಾಣೆಮಂಗಳೂರಿನಲ್ಲಿ ನಡೆದಿದೆ. ಸಜೀಪ ನಿವಾಸಿ ಅಲ್ತಾಫ್ (18) ಮೃತಪಟ್ಟ ಯುವಕ.

ಬಿ.ಸಿ.ರೋಡಿನಿಂದ ಬರುತ್ತಿದ್ದ ರಿಕ್ಷಾ ಹಾಗೂ ಪಾಣೆಮಂಗಳೂರು ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತ ಸಂದರ್ಭ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ರಿಕ್ಷಾದಲ್ಲಿದ್ದ ಪ್ರಯಾಣಿಕ ಅಲ್ತಾಫ್ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರವಾದ ಗಾಯವಾಗಿತ್ತು. ಅಲ್ತಾಫ್ ಅವರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!