ಕರಾವಳಿ

ಶಾಸಕ ಹರೀಶ್ ಪೂಂಜಾ ವಿರುದ್ಧದ ಎರಡೂ ಪ್ರಕರಣಗಳಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ ಶೀಟ್‌ ಸಲ್ಲಿಕೆ



ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ ಶಾಸಕ ಹರೀಶ್‌ ಪೂಂಜ ವಿರುದ್ಧ ದಾಖಲಾದ ಎರಡೂ ಪ್ರಕರಣಗಳ ತ್ವರಿತ ತನಿಖೆ ನಡೆಸಿದ ಪೊಲೀಸರು ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ (ಚಾರ್ಜ್‌ ಶೀಟ್‌) ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.



ಪ್ರಕರಣದ ತನಿಖೆಗಾಗಿ ಪೊಲೀಸ್‌ ಅಧೀಕ್ಷಕರು ನಿಯೋಜಿಸಲ್ಪಟ್ಟಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಪುತ್ತೂರು ಪೊಲೀಸ್‌ ಇನ್ಸ್‌ಪೆಕ್ಟರ್‌ ಸತೀಶ್‌ ಜಿ.ಜೆ. ಅವರು ಬೆಂಗಳೂರಿನ ನ್ಯಾಯಾಲಯಕ್ಕೆ  ಆರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!