ಯುಪಿ ಸಿಎಂ ಆದಿತ್ಯನಾಥ್ಗೆ ಪತ್ರ ಬರೆದ ರಾಹುಲ್ ಗಾಂಧಿ
ನವದೆಹಲಿ: ಹತ್ರಾಸ್ ನಲ್ಲಿ ಸ್ವಯಂಘೋಷಿತ ಭೋಲೆಬಾಬಾ ಎಂಬಾತನ ಸತ್ಸಂಗ ಎಂಬ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 121 ಮಂದಿ ಮೃತಪಟ್ಟು ಹಲವರಿಗೆ ಗಂಭೀರ ಗಾಯಗೊಂಡಿರುವ ದುರಂತದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.

ಹತ್ರಾಸ್ ಕಾಲ್ತುಳಿತದಲ್ಲಿ ಮೃತಪಟ್ಟ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು ಹೆಚ್ಚಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಉತ್ತರಪ್ರದೇಶ ಸರ್ಕಾರ ಘೋಷಿಸಿರುವ ಪರಿಹಾರ ತೀರಾ ಅಸಮರ್ಪಕವಾಗಿದೆ. ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಹಾಗೂ ಅದನ್ನು ಆದಷ್ಟು ಬೇಗ ಅವರಿಗೆ ತಲುಪುವಂತೆ ಮಾಡಬೇಕು. ಮತ್ತು ಗಾಯಾಳುಗಳಿಗೆ ತಕ್ಷಣ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಮತ್ತು ನ್ಯಾಯ ವ್ಯವಸ್ಥೆಯಲ್ಲಿ ಈ ಸಂತ್ರಸ್ತ ಕುಟುಂಬಗಳ ನಂಬಿಕೆಯನ್ನು ಉಳಿಸಿಕೊಳ್ಳಲು ಸರಿಯಾದ ತನಿಖೆ ಅಗತ್ಯ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವುದು ಸೂಕ್ತ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.