ರಾಷ್ಟ್ರೀಯ

ಪ್ರತೀವರ್ಷ ‘ಜೂನ್ 25’ರಂದು ‘ಸಂವಿಧಾನ ಹತ್ಯಾ ದಿವಸ’ ಆಚರಣೆ- ಅಮಿತ್ ಶಾ



ಪ್ರತಿವರ್ಷ ಜೂನ್ 25ನ್ನು ‘ಸಂವಿಧಾನ ಹತ್ಯಾ ದಿವಸ’ ಎಂದು ಆಚರಿಸಲು ಕೇಂದ್ರ ಸರಕಾರ ನಿರ್ಧಾರ ಮಾಡಿದೆ.  ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ವಿರುದ್ಧ ದಾಳಿ ಮುಂದುವರಿಸಿರುವ ಕೇಂದ್ರ ಸರ್ಕಾರ ಪ್ರತಿವರ್ಷ ಜೂನ್ 25ನ್ನು ‘ಸಂವಿಧಾನ ಹತ್ಯಾ ದಿವಸ’ ಎಂದು ಆಚರಿಸಲು ನಿರ್ಧರಿಸಿದೆ. ಈ ಬಗ್ಗೆ ಎಕ್ಸ್ನಲ್ಲಿ ಘೋಷಣೆ ಮಾಡಿರುವ ಗೃಹ ಸಚಿವ ಅಮಿತ್ ಶಾ ಗೆಜೆಟ್ ಅಧಿಸೂಚನೆಯನ್ನು ಪೋಸ್ಟ್ ಮಾಡಿದ್ದಾರೆ.


ಜೂನ್ 25, 1975ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಸರ್ವಾಧಿಕಾರಿ ಮನಸ್ಥಿತಿಯಿಂದ ತುರ್ತು ಪರಿಸ್ಥಿತಿ ಹೇರುವ ಮೂಲಕ ನಮ್ಮ ಪ್ರಜಾಪ್ರಭುತ್ವದ ಕತ್ತು ಹಿಸುಕಿದರು. ಇದರಿಂದ ತಮ್ಮ ತಪ್ಪಿಲ್ಲದಿದ್ದರೂ ಲಕ್ಷಾಂತರ ಜನರನ್ನು ಜೈಲಿಗೆ ಹಾಕಲಾಯಿತು ಮತ್ತು ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕಲಾಯಿತು” ಎಂದು ಅಮಿತ್‌ ಶಾ ಬರೆದಿದ್ದಾರೆ.
ಭಾರತ ಸರ್ಕಾರ ಪ್ರತಿ ವರ್ಷ ಜೂನ್ 25ನ್ನು ‘ಸಂವಿಧಾನ ಹತ್ಯಾ ದಿವಸ’ ಎಂದು ಆಚರಿಸಲು ನಿರ್ಧರಿಸಿದೆ. ಈ ದಿನವು 1975ರ ತುರ್ತು ಪರಿಸ್ಥಿತಿಯ ಅಮಾನವೀಯ ನೋವುಗಳನ್ನು ಸಹಿಸಿಕೊಂಡ ಎಲ್ಲರ ಬೃಹತ್ ಕೊಡುಗೆಗಳನ್ನು ಸ್ಮರಿಸುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!