ಕರಾವಳಿರಾಜಕೀಯರಾಜ್ಯ

ಕರ್ನಾಟಕ ರಾಜ್ಯ ಇಂಟಕ್ ಕಾಂಗ್ರೆಸ್ ನ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಬರೆಪ್ಪಾಡಿ ನೇಮಕ



ಇಂಟಕ್ ಕಾಂಗ್ರೆಸ್ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಬರೆಪ್ಪಾಡಿ ನೇಮಕಗೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಕರ್ನಾಟಕ ವಿಧಾನ ಪರಿಷತ್ ನ ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಇಂಟಕ್ ರಾಜ್ಯಾಧ್ಯಕ್ಷರಾದ ಲಕ್ಷ್ಮೀ ವೆಂಕಟೇಶ್ ಹಾಗೂ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರ ಆದೇಶದ ಮೇರೆಗೆ ಇಂಟಕ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಡಾ.ಕುಮಾರ್ ಟಿ.ವೈ ಅವರು ಈ ನೇಮಕ ಮಾಡಿದ್ದಾರೆ.

ಸಲೀಂ ಅವರು, ಪುತ್ತೂರು ಹಾಗೂ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯತ್, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಪರವಾಗಿ ದುಡಿದಿದ್ದಾರೆ.


ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ವಿದೇಶದಲ್ಲಿದ್ದ ಸಂದರ್ಭದಲ್ಲಿ ಅನಿವಾಸಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಯಾಗಿ, ಕರ್ನಾಟಕ ಕನ್ನಡಿಗರ ಸಂಘದ ಪದಾಧಿಕಾರಿಯಾಗಿಯೂ, ಹಾಗೂ ಕೆ.ಐ.ಸಿ ಯೂತ್ ವಿಂಗ್ ನ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಪುತ್ತೂರಿನ ಹೆಚ್.ಎಂ.ಸಿ ಹೆಲ್ಪ್ ಲೈನ್ ಇದರ ಸಂಯೋಜಕರಾಗಿ ಬಡಕುಟುಂಬಗಳಿಗೆ ನೆರವಾಗಿದ್ದಾರೆ. ಪ್ರಸ್ತುತ ಕೂರತ್ ಫಝಲ್ ಜುಮಾ ಮಸೀದಿಯ ಉಪಾಧ್ಯಕ್ಷರಾಗಿ, ವಿವಿಧ ಸಂಘಟನೆಗಳ ಮೂಲಕ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಇವರು ಪ್ರಸ್ತುತ ಸಂಪ್ಯ ನಿವಾಸಿಯಾಗಿರುವ ಬಿ.ಎಂ.ಬಾವುಞ್ ಹಾಗೂ ರುಕಿಯಾ ಅವರ ಪುತ್ರ.

Leave a Reply

Your email address will not be published. Required fields are marked *

error: Content is protected !!