ರಾಜ್ಯರಾಷ್ಟ್ರೀಯ

ಶಿರೂರು: ಮಣ್ಣಿನಡಿ ಸಿಲುಕಿರುವ ಕೇರಳದ ಲಾರಿ ಚಾಲಕನಿಗಾಗಿ ತೀವ್ರ ಹುಡುಕಾಟ



ಶಿರೂರು: ಉತ್ತರಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮಣ್ಣಿನಡಿಯಲ್ಲಿ ಸಿಲುಕಿದವರ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಮಳೆಗೆ ಕಾರ್ಯಾಚರಣೆಗೆ ತೊಡಲಾಗಿತ್ತು. ಲಾರಿ ಸಮೇತ ನೆಲದಡಿಯಲ್ಲಿ ಹೂತು ಹೋಗಿದ್ದಾರೆ ಎನ್ನಲಾಗುತ್ತಿರುವ ಕೇರಳದ ಕೋಯಿಕ್ಕೋಡ್ ನಿವಾಸಿ ಅರ್ಜುನ್ ಗಾಗಿ ಹುಡುಕಾಟ ತೀವ್ರಗೊಂಡಿದೆ.

ಕೇರಳಕ್ಕೆ ತೆರಳುತ್ತಿದ್ದ ವೇಳೆ ಅರ್ಜುನ್ ಅವರು ಲಾರಿ ಸಮೇತ ನಾಪತ್ತೆಯಾಗಿದ್ದರು. ಜಗಲ್‌ಪೇಟೆಯಿಂದ ಮರ ತುಂಬಿಕೊಂಡು ಪ್ರಯಾಣ ಆರಂಭಿಸಿದ್ದ ಅವರು ಕೇರಳ ರಾಜ್ಯದತ್ತ ತೆರಳುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿತ್ತು. ಶಿರೂರಿನಲ್ಲಿರುವ ಕ್ಯಾಂಟೀನ್ ನಲ್ಲಿ ಅರ್ಜುನ್ ಅವರು ಚಹಾ ಕುಡಿಯಲು ನಿಲ್ಲಿಸಿದ್ದ ವೇಳೆ ಘಟನೆ ನಡೆದಿತ್ತು ಎನ್ನಲಾಗಿದೆ. ಅರ್ಜುನ್ ಅವರು ಜೀವಂತವಾಗಿದ್ದಾರೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಅರ್ಜುನ್ ಅವರ ಸುರಕ್ಷಿತ ಬರುವಿಕೆಗಾಗಿ ಎಲ್ಲೆಡೆ ಪ್ರಾರ್ಥನೆ ಮಾಡಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!