ರಾಜಕೀಯರಾಷ್ಟ್ರೀಯ

ಆ.22ರಂದು ದೇಶಾದ್ಯಂತ  ಕಾಂಗ್ರೆಸ್ ಪ್ರತಿಭಟನೆ

ಆ. 22ರಂದು ದೇಶಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್ ಕರೆ ನೀಡಿದೆ. ರಾಜ್ಯಗಳ ಜಾರಿ ನಿರ್ದೇಶನಾಲಯ (ED) ಕಚೇರಿಗಳ ಹೊರಗೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ.

ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ

ಹಿಂಡೆನ್‌ಬರ್ಗ್ ವರದಿ ಹಿನ್ನೆಲೆಯಲ್ಲಿ ಮತ್ತು ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್ ಅವರನ್ನು ತೆಗೆದುಹಾಕುವಂತೆ ಒತ್ತಾಯಿಸಲು ಆಗಸ್ಟ್ 22 ರಂದು ರಾಜ್ಯಗಳ ಜಾರಿ ನಿರ್ದೇಶನಾಲಯ (ED) ಕಚೇರಿಗಳ ಎದುರು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಘೋಷಿಸಿದೆ. ಅದೇ ವೇಳೆ ಅದಾನಿ ಗ್ರೂಪ್ ಕಂಪನಿಗಳ ಮೇಲಿನ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಹಳೆಯ ಪಕ್ಷವು ಒತ್ತಾಯಿಸಿದೆ. ಆಗಸ್ಟ್ 22 ರಂದು ಪ್ರತಿ ರಾಜ್ಯ ರಾಜಧಾನಿಯಲ್ಲಿನ ಜಾರಿ ನಿರ್ದೇಶನಾಲಯದ ಕಚೇರಿಯನ್ನು ಕಾಂಗ್ರೆಸ್ ಪ್ರತಿಭಟನಾಕಾರರು ಘೇರಾವ್ ಮಾಡಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!