ಕ್ರೈಂರಾಜ್ಯ

ಸೆಲ್ಫಿ ತೆಗೆಯುವ ವೇಳೆ ಕಾಲುಜಾರಿ ಬಿದ್ದು ಯುವಕ ಮೃತ್ಯು



ಸೆಲ್ಫಿ ತೆಗೆದುಕೊಳ್ಳುವಾಗ ಕಾಲುಜಾರಿ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ.

ಶಿರಾಳಕೊಪ್ಪದ ಗಂಡಗದಕೇರಿಯ ನಿವಾಸಿ ತಾಹೀರ್(21) ಮೃತ ಯುವಕ. ಸ್ನೇಹಿತರೊಂದಿಗೆ ಅಕ್ಕಮಹಾದೇವಿ ಜನ್ಮಸ್ಥಳ ನೋಡಲು ಬಂದಿದ್ದ ವೇಳೆ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಈ ದುರ್ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!